Posts

Showing posts from November, 2023

DK Shivakumar : ಸಿಬಿಐ ಕೇಸ್ ವಾಪಸ್‌; ಡಿ.ಕೆ ಶಿವಕುಮಾರ್‌ಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

Image
  DK Shivakumar : ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ವಿಚಾರದಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ತಾತ್ಕಾಲಿಕ ಬಿಗ್‌ ರಿಲೀಫ್‌ ಸಿಕ್ಕಿದೆ. ಇದರ ಮುಂದಿನ ಹೆಜ್ಜೆ ಏನು ಎನ್ನುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಡೆಸುತ್ತಿರುವ ತನಿಖೆಗೆ (CBI Investigation) ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ರಾಜ್ಯ ಹೈಕೋರ್ಟ್‌ (Karnataka High court) ಬಿಗ್‌ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಆದಾಯ ಮೀರಿ ಅಧಿಕ ಆಸ್ತಿ ಗಳಿಕೆ ಪ್ರಕರಣದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ ಅವರ ಪರ ವಕೀಲರು ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಇದಕ್ಕೆ ಸಿಬಿಐ ವಿರೋಧ ವ್ಯಕ್ತಪಡಿಸಿದರೂ ಹೈಕೋರ್ಟ್‌ ಅದನ್ನು ಪರಿಗಣಿಸಿಲ್ಲ. ಈ ಪ್ರಕರಣದಲ್ಲಿ ಈಗ ಸಿಬಿಐ ತನ್ನ ತನಿಖೆಯನ್ನು ಮುಂದುವರಿಸಬಹುದೇ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಅಥವಾ ರಾಜ್ಯ ಸರ್ಕಾರ ತನ್ನ ಸಂಪುಟದ ಮೂಲಕ ಕೇಸನ್ನು ಹಿಂಪಡೆದ ಆದೇಶ ನಿಲ್ಲುತ್ತದೆಯೇ ಎನ್ನುವುದು ಇನ್ನೂ ...

DK Shivakumar : ಡಿಕೆಶಿ ವಿರುದ್ಧದ ಸಿಬಿಐ ಕೇಸ್‌ ವಾಪಸ್‌ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌

Image
  DK Shivakumar : ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ಕೇಸ್‌ ವಾಪಸ್‌ ತೀರ್ಮಾನದ ವಿರುದ್ಧ ಕೋರ್ಟ್‌ ಮೆಟ್ಟಿಲು ಹತ್ತುವೆ ಎಂಬ ಮಾತನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಳಿಸಿಕೊಂಡಿದ್ದಾರೆ. ಬೆಂಗಳೂರು:  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರ ವಿರುದ್ಧ ಸಿಬಿಐ ದಾಖಲಿಸಿಕೊಂಡಿರುವ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು (CBI Case against DK Shivakumar) ಹಿಂದಕ್ಕೆ ಪಡೆಯುವ ರಾಜ್ಯ ಸಚಿವ ಸಂಪುಟದ (State Cabinet meeting) ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಸನ ಗೌಡ ಪಾಟೀಲ್‌ ಯತ್ನಾಳ್‌ (Basanagowda pateel Yatnal) ಅವರು ಹೈಕೋರ್ಟ್‌ (Karnataka High court) ಮೆಟ್ಟಿಲೇರಿದ್ದಾರೆ. ಸರ್ಕಾರದ ಈ ನಡೆ ಕಾನೂನುಬಾಹಿರವಾಗಿದ್ದು, ಇದನ್ನು ತಡೆಯಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದಾವೆಯಲ್ಲಿ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೋರ್ಟ್‌ಗೆ ಹೋಗುವುದಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಂದೆಯೇ ಪ್ರಕಟಿಸಿದ್ದು, ಅದರಂತೆ ನಡೆದುಕೊಂಡಿದ್ದಾರೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ತನಿಖೆಯನ್ನೇ ನಿಷ್ಫಲಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಯತ್ನಾಳ್‌ ತಮ್ಮ ದಾವೆಯಲ್ಲಿ ಹೇಳಿದ್ದಾರೆ. ಮುಕ್ತಾಯದ ಹಂತಕ್ಕೆ ಬಂದಿರುವ ಪ್ರಕರಣವನ್ನು ಕೆಲವೊಂದು ಸಂಬಂಧವಿಲ್ಲದ ತಾಂತ್...

HD Kumaraswamy : ಸರಕಾರ ಲೂಟಿಕೋರರ ಪರ ಎನ್ನುವುದು ಸಾಬೀತಾಯ್ತು ಎಂದ ಕುಮಾರಸ್ವಾಮಿ

Image
  HD Kumaraswamy : ಡಿಕೆ ಶಿವಕುಮಾರ್‌ ಅವರಿಗೆ ರಕ್ಷಣೆ ನೀಡಲು ಪ್ರಯತ್ನಿಸುವ ಮೂಲಕ ರಾಜ್ಯ ಸರ್ಕಾರ ತಾನು ಲೂಟಿಕೋರರ ಪರ ಎಂದು ಸಾಬೀತು ಮಾಡಿದೆ ಎಂದಿದ್ದಾರೆ ಎಚ್‌.ಡಿ ಕುಮಾರಸ್ವಾಮಿ. ರಾಮನಗರ:  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ವಿರುದ್ಧ ಸಿಬಿಐ ತನಿಖೆಗೆ (CBI Enquiry) ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ (Congress Government) ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮ ನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರಲ್ಲದೆ; ಕಳ್ಳಕಾಕರ ರಕ್ಷಣೆಗೆ ಈ ಸರಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯ...

HD Kumaraswamy : ಹುಷಾರ್‌…! ಏನೇನೋ ಮಾತಾಡಬೇಡಿ, ಪೆನ್‌ಡ್ರೈವ್ ಠುಸ್ ಆಗಿಲ್ಲ ಎಂದ ಎಚ್‌ಡಿಕೆ

Image
  HD Kumaraswamy : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪೆನ್‌ಡ್ರೈವ್‌ ಮತ್ತೆ ಸದ್ದು ಮಾಡಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಎಚ್‌ಡಿಕೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಪೆನ್‌ಡ್ರೈವ್‌ ಠುಸ್‌ ಎಂದೆಲ್ಲ ಹೇಳಬೇಡಿ. ಅದೇನು ಠುಸ್‌ ಆಗಿಲ್ಲ. ನಿಮ್ಮ ಸಚಿವರು ಮನವಿ ಮಾಡಿಕೊಂಡಿದ್ದಕ್ಕೆ ಬಿಟ್ಟಿದ್ದೇನೆ ಎಂಬರ್ಥದಲ್ಲಿ ಗುಡುಗಿದ್ದಾರೆ. ಬೆಂಗಳೂರು:  ಪೆನ್‌ಡ್ರೈವ್ ಠುಸ್ ಆಯಿತು (Pen Drive Politics) ಅಂತ ಹೇಳುತ್ತೀರಲ್ಲವೇ? ನಿಮ್ಮ ಸಚಿವರು ನನಗೆ ಯಾಕೆ ಮನವಿ ಮಾಡಿದರು? ನಿದ್ದೆಗೆಟ್ಟು ಸಂಪರ್ಕ ಮಾಡಿದ್ದರಲ್ಲ. ಯಾರು ಯಾರು ಫೋನ್ ಮಾಡಿದಿರಿ? ನಿಮ್ಮ ಋಣದಲಿ ಇದ್ದೇವೆ ಅಂತ ಮನವಿ ಮಾಡಿದವರು ಯಾರು? ಠುಸ್ ಆಗಿಲ್ಲ ಎಚ್ಚರಿಕೆಯಿಂದ ಇರಿ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಸಹಿತ ಕಾಂಗ್ರೆಸ್‌ ಸರ್ಕಾರಕ್ಕೆ (Congress Government) ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನನ್ನ ಬಳಿ ಇರುವ ಪೆನ್‌ಡ್ರೈವ್ ಠುಸ್‌ ಆಗಿದೆ ಎಂದೆಲ್ಲ ಹೇಳಬೇಡಿ ಎಂದು ಎಚ್ಚರಿಕೆಯನ್ನು ಕೊಡುವ ಮೂಲಕ ಕಾಂಗ್ರೆಸ್‌ ಸಚಿವರಾದಿಯಾಗಿ ಹಲವರು ಮನವಿ ಮಾಡಿಕೊಂಡಿದ್ದಕ್ಕೆ ಸುಮ್ಮನಿದ್ದೇನೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ವಿದ್ಯುತ್‌ ಬಳಕೆಗೆ ದಂಡ...

DK Shivakumar : ಯತೀಂದ್ರ ನಮ್ಮ ಹುಡುಗ, ಆರೋಪ ಮಾಡಿ ನಾಯಕನಾಗಿ ಬೆಳೆಸಲಿ ಬಿಡಿ ಎಂದ ಡಿಕೆಶಿ

Image
  DK Shivakumar : ವರ್ಗಾವಣೆ ದಂಧೆ ಬಗ್ಗೆ ಮಾತುಕತೆ ನಡೆದಿದೆ ಎಂಬ ಆರೋಪ ಹೊತ್ತ ವಿಡಿಯೊ ವಿಚಾರದಲ್ಲಿ ಡಿ.ಕೆ. ಶಿವಕುಮಾರ್‌ ಅವರು ಯತೀಂದ್ರ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿದ್ದಾರೆ. ಬೆಂಗಳೂರು:  “ಯತೀಂದ್ರ (Yathindra Siddaramaiah) ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು (ಯತೀಂದ್ರ) ನಾಯಕನ್ನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಯತೀಂದ್ರ ಅವರು “ನಾನು ಹೇಳಿದ್ದು ಕ್ಲಿಯರ್ ಮಾಡಿ ಅಪ್ಪ” ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ಇದು ವರ್ಗಾವಣೆ ದಂಧೆಯ ಪಟ್ಟಿ ಎಂದು ಬಿಜೆಪಿ- ಜೆಡಿಎಸ್ ಆರೋಪ ಮಾಡಿರುವ ಬಗ್ಗೆ ಕೇಳಿದಾಗ ಡಿ.ಕೆ. ಶಿವಕುಮಾರ್‌ ಈ ಉತ್ತರ ನೀಡಿದರು. “ಮಾಜಿ ಶಾಸಕರಾಗಿರುವ ಯತೀಂದ್ರ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ನಾನು ಬೆಳಗ್ಗೆಯೇ ಆ ವಿಡಿಯೊ ನೋಡಿದೆ. ವರ್ಗಾವಣೆ ದಂಧೆ ಎನ್ನಲು ಅವರು ಯಾವ ಅಧಿಕಾರಿ, ಯಾವ ಹುದ್ದೆ ಎಂದು ಉಲ್ಲೇಖವನ್ನೇ ಮಾಡಿಲ್ಲವಲ್ಲ. ಮಾಜಿ ಶಾಸಕರಾಗಿ ಯತ...

BY Vijayendra: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ; ಯುವ ನಾಯಕನಿಗೆ ಪಟ್ಟ

Image
  BY Vijayendra : ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಿಸಲಾಗಿದೆ. ಇದು ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್‌ನಿಂದ ದೀಪಾವಳಿ ಕೊಡುಗೆ ಎಂದು ಬಣ್ಣಿಸಲಾಗಿದೆ. ಬೆಂಗಳೂರು:  ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷರ (BJP State President) ನೇಮಕವಾಗಿದೆ. ಶಿಕಾರಿಪುರ ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ, ಪ್ರಭಾವಿ ಯುವ ನಾಯಕ ಬಿ.ವೈ. ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ನೇಮಕವನ್ನು ಪ್ರಕಟಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ ಕುಟುಂಬಕ್ಕೆ ವಿಶೇಷ ಕೊಡುಗೆಯನ್ನು ನೀಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗುತ್ತಾರೆ ಎಂಬ ಬಹುಕಾಲದ ಕಾತರಕ್ಕೆ ತೆರೆ ಬಿದ್ದಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರಾಗಿದ್ದು, ಅವರ ಅಧಿಕಾರಾವಧಿ ಒಂದು ವರ್ಷದ ಹಿಂದೆಯೇ ಮುಕ್ತಾಯವಾಗಿದೆ. ಇದೀಗ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಹೈಕಮಾಂಡ್‌ ದೊಡ್ಡದೊಂದು ನಿರ್ಧಾರವವನ್ನು ಮಾಡಿದೆ. ವಿಜಯೇಂದ್ರ ಅವರು ಕೂಡಾ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಿ ಕಳೆದ ವಿಧಾನಸಭಾ ಚುನಾವಣ...