HD Kumaraswamy : ಹುಷಾರ್‌…! ಏನೇನೋ ಮಾತಾಡಬೇಡಿ, ಪೆನ್‌ಡ್ರೈವ್ ಠುಸ್ ಆಗಿಲ್ಲ ಎಂದ ಎಚ್‌ಡಿಕೆ

 HD Kumaraswamy : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪೆನ್‌ಡ್ರೈವ್‌ ಮತ್ತೆ ಸದ್ದು ಮಾಡಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಎಚ್‌ಡಿಕೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಪೆನ್‌ಡ್ರೈವ್‌ ಠುಸ್‌ ಎಂದೆಲ್ಲ ಹೇಳಬೇಡಿ. ಅದೇನು ಠುಸ್‌ ಆಗಿಲ್ಲ. ನಿಮ್ಮ ಸಚಿವರು ಮನವಿ ಮಾಡಿಕೊಂಡಿದ್ದಕ್ಕೆ ಬಿಟ್ಟಿದ್ದೇನೆ ಎಂಬರ್ಥದಲ್ಲಿ ಗುಡುಗಿದ್ದಾರೆ.



ಬೆಂಗಳೂರು: ಪೆನ್‌ಡ್ರೈವ್ ಠುಸ್ ಆಯಿತು (Pen Drive Politics) ಅಂತ ಹೇಳುತ್ತೀರಲ್ಲವೇ? ನಿಮ್ಮ ಸಚಿವರು ನನಗೆ ಯಾಕೆ ಮನವಿ ಮಾಡಿದರು? ನಿದ್ದೆಗೆಟ್ಟು ಸಂಪರ್ಕ ಮಾಡಿದ್ದರಲ್ಲ. ಯಾರು ಯಾರು ಫೋನ್ ಮಾಡಿದಿರಿ? ನಿಮ್ಮ ಋಣದಲಿ ಇದ್ದೇವೆ ಅಂತ ಮನವಿ ಮಾಡಿದವರು ಯಾರು? ಠುಸ್ ಆಗಿಲ್ಲ ಎಚ್ಚರಿಕೆಯಿಂದ ಇರಿ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಸಹಿತ ಕಾಂಗ್ರೆಸ್‌ ಸರ್ಕಾರಕ್ಕೆ (Congress Government) ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನನ್ನ ಬಳಿ ಇರುವ ಪೆನ್‌ಡ್ರೈವ್ ಠುಸ್‌ ಆಗಿದೆ ಎಂದೆಲ್ಲ ಹೇಳಬೇಡಿ ಎಂದು ಎಚ್ಚರಿಕೆಯನ್ನು ಕೊಡುವ ಮೂಲಕ ಕಾಂಗ್ರೆಸ್‌ ಸಚಿವರಾದಿಯಾಗಿ ಹಲವರು ಮನವಿ ಮಾಡಿಕೊಂಡಿದ್ದಕ್ಕೆ ಸುಮ್ಮನಿದ್ದೇನೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ವಿದ್ಯುತ್‌ ಬಳಕೆಗೆ ದಂಡ ಕಟ್ಟಿದ್ದೇನೆ

ದೀಪಾವಳಿ ಹಬ್ಬ (Deepawali Festival) ಸಂದರ್ಭದಲ್ಲಿ ಮನೆಯಲ್ಲಿ ಆದ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆ ದಿನ ಉಪಯೋಗಿಸಿದ 68,526 ರೂಪಾಯಿ ದಂಡ ಹಾಕಿದ್ದಾರೆ. ಆ ಹಣವನ್ನು ನಾನು ಕಟ್ಟಿದ್ದೇನೆ. ಇನ್ನು ಮುಂದೆ ಕರೆಂಟ್ ಕಳ್ಳ ಅನ್ನೋದನ್ನು ನಿಲ್ಲಿಸಿ. ಹಗಲು ದರೋಡೆಕೋರರು ನೀವು. ನಿಮ್ಮಷ್ಟು ದೊಡ್ಡ ಕಳ್ಳ ನಾನಲ್ಲ. ಲೂಲೂ ಮಾಲ್‌ಗೆ (Lulu Mall) ನೀವು ಆರು ತಿಂಗಳು ಕರೆಂಟ್‌ ಬಿಲ್‌ (Electricity Bill) ಅನ್ನೇ ಕೊಟ್ಟಿಲ್ಲ. ನನಗೆ ಈಗ ಹೇಳಲು ಬರುತ್ತೀರಾ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿದ್ಯುತ್ ಕಳ್ಳ ಅಂತ ನನಗೆ ಲೇಬಲ್ ಕಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನಾನೀಗ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ನನಗೆ ವಿದ್ಯುತ್‌ ಕಳ್ಳ ಎಂದು ಕರೆಯುವ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಒಟ್ಟು 68,526 ರೂಪಾಯಿ ದಂಡ ಹಾಕಿದ್ದಾರೆ. ಈ ಸಂಬಂಧ ಒಂದು ಬಿಲ್ ಕೊಟ್ಟಿದ್ದಾರೆ. 2.5 ಕಿಲೋ ವ್ಯಾಟ್ ಉಪಯೋಗ ಮಾಡಿಕೊಂಡಿದ್ದೇನೆ. ಒಟ್ಟು 2526 ರೂಪಾಯಿ ಹಾಕಿದ್ದಾರೆ. ಮನೆಗೆ 33 ಕಿಲೋ ವ್ಯಾಟ್ (ಪ್ರತಿದಿನ) ಉಪಯೋಗಿಸುತ್ತಿದ್ದೇನೆ. ಅದಕ್ಕೆ ಎರಡು ಸಾವಿರ ರೂಪಾಯಿಯಂತೆ ದಂಡ ಹಾಕಿದ್ದಾರೆ. ನಾನೇ ದಂಡ ಕಟ್ಟುತ್ತೇನೆಂದು ಹೇಳಿದೆ. ಮಹಜರ್‌ಗೆ ಬಂದವರು ಟಿವಿ ಮೀಡಿಯಾದಲ್ಲಿ ಬಂದ ವರದಿ ಆಧಾರದ ಮೇಲೆ ಮಹಜರ್ ಮಾಡಲು ಬಂದಿದ್ದೇವೆಂದು ಹೇಳಿದ್ದರು. ನನ್ನ ಮನೆಯ ಸೀರಿಯಲ್ ಸೆಟ್‌ಗೆ ಒಂದು ಕಿಲೋ ವ್ಯಾಟ್‌ಗಿಂತಲೂ ಕಡಿಮೆ ಬರುತ್ತದೆ. ಆದರೆ, ಇವರು 2.5 ಕಿಲೋ ವ್ಯಾಟ್‌ಗೆ ಏಳು ದಿನಕ್ಕೆ ಚಾರ್ಜ್ ಮಾಡಿದ್ದಾರೆ. ಒಟ್ಟು 71 ಯುನಿಟ್ ಬಳಕೆಗೆ 3ರಷ್ಟು ದಂಡ ಹಾಕಿದ್ದಾರೆ. ದಂಡದ ಹಣ ಕಟ್ಟಿದ್ದೇನೆ. ಆದರೆ, ಇದನ್ನು ವಿರೋಧ ಮಾಡಿ ಕಟ್ಟಿದ್ದೇನೆ. ಹೆಚ್ಚುವರಿ ಬಿಲ್ ಮುಂದೆ ನನ್ನ ಮನೆಗೆ ಬರುವ ಬಿಲ್‌ಗೆ ಅಡ್ಜೆಸ್ಟ್ ಮಾಡಬೇಕು ಎಂದು ಹೇಳಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಲೂಲೂ ಮಾಲ್‌ಗೆ ಏಕೆ ವಿದ್ಯುತ್‌ ಬಿಲ್‌ ಹಾಕಲಿಲ್ಲ?

ಲೂಲೂ ಮಾಲ್‌ಗೆ ಆರು ತಿಂಗಳು ವಿದ್ಯುತ್ ಬಿಲ್ ಹಾಕಿಲ್ಲ. ನನ್ನನ್ನು ಕಳ್ಳ ಅಂದರಲ್ಲವೇ? ಇವರು ಕಟ್ಟಿದ್ದಾರಾ? ಮೇಕೆದಾಟು ಪ್ರತಿಭಟನೆಗೆ ಕರೆಂಟ್ ಅನುಮತಿ ತಗೊಂಡಿದ್ದರಾ? ನನಗಿಂತಲೂ ದೊಡ್ಡ ಕಳ್ಳ ಅಂತ ಹೇಳಲೇ? ಕನಕೋತ್ಸವ ಮಾಡಿದ್ರಲ್ಲ ಅದಕ್ಕೆ ಪರ್ಮಿಷನ್ ತಗೊಂಡಿದ್ದಾರಾ? ನನ್ನ ಬಳಿ ಸಹ ವಿಡಿಯೊ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಕರೆಂಟ್‌ ಬಿಲ್‌ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ


ವರ್ಗಾವಣೆ ದಂಧೆ ನಡೆಯುತ್ತಿರಬೇಕಾದರೆ ಯಾಕೆ ತಡೆಯಲಿಲ್ಲ?

ಇಡೀ ದಿನ ವರ್ಗಾವಣೆಗೆ ಸಂಬಂಧಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೊ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ವರ್ಗಾವಣೆ ವಿಚಾರ ಅಲ್ಲ ಅಂತ ಹೇಳಿದ್ದಾರೆ. ತ್ಯಾಗ ಮಾಡಿದ್ದಾರಂತೆ ಅದನ್ನು ಒಪ್ಪೋಣ. ಕ್ಷೇತ್ರದ ಕೆಲಸ ಮಾಡುತ್ತಿದ್ದಾರಂತೆ ಒಪ್ಪಿಕೊಳ್ಳೋಣ. ಆದರೆ, ನಾನು ಹತಾಶೆಯಿಂದ ಮಾತನಾಡುತ್ತಿದ್ದೇನೆಂದು ಟ್ವೀಟ್ ಮಾಡಿದ್ದಾರೆ. ನಾನು ಸದಾ ವರ್ಗಾವಣೆಯಲ್ಲಿ ಇದ್ದೆ ಅಂತ ಹೇಳಿದ್ದೀರಿ. ವರ್ಗಾವಣೆ ದಂಧೆ ನಡೆಯುತ್ತಿರಬೇಕಾದರೆ ಯಾಕೆ ತಡೆಯಲಿಲ್ಲ? ನೀವು ಕೋ ಆರ್ಡಿನೇಷನ್ ಚೇರ್ ಮ್ಯಾನ್ ಆಗಿದ್ದಿರಿ. ಯಾಕೆ ಹೇಳಲಿಲ್ಲ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮೂಲತಃ ಲೇಖನವನ್ನು ಇಲ್ಲಿ ಪ್ರಕಟಿಸಲಾಗಿದೆ: 👉 Kannada News

ಇಂತಹ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👉 kannada suddi


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!