Ram Mandir: ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಕ್ರಿಕೆಟ್ ದಿಗ್ಗಜ ಸಚಿನ್‌!
ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ



ಮುಂಬಯಿ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರ (Ram Mandir) ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿ ಇವೆ. ಪ್ರಮುಖ ಆಯ್ದ ಗಣ್ಯರಿಗೆ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ನೀಡಲಾಗುತ್ತಿದೆ. ಇದೀಗ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ, ಭಾರತ ರತ್ನ ಸಚಿನ್​ ತೆಂಡೂಲ್ಕರ್(Sachin Tendulkar)​ ಅವರಿಗೂ ಆಹ್ವಾನವನ್ನು ನೀಡಲಾಗಿದೆ. ಸಚಿನ್​ ಈ ಆಹ್ವಾನವನ್ನು ಸಂತಸದಿಂದಲೇ ಸ್ವೀಕರಿಸಿದ್ದಾರೆ.

ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಹ್ವಾನ ಸ್ವೀಕರಿಸಿದ ಸಚಿನ್​ ಕೂಡ ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಅಧಿಕವಾಗಿದೆ.ಸೆಪ್ಟೆಂಬರ್​ನಲ್ಲಿ ವಾರಣಾಸಿಯಲ್ಲಿ ಶಂಕುಸ್ಥಾಪನೆಗೊಂಡ ಅಂತಾರಾಷ್ಟ್ರೀಯ(international cricket stadium in Varanasi) ಕ್ರಿಕೆಟ್ ಸ್ಟೇಡಿಯಂನ ಸಮಾರಂಭದಲ್ಲಿ ಸಚಿನ್​ ತೆಂಡೂಲ್ಕರ್​ ಅವರು ಗಣ್ಯ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರು. ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತೀಯ ಕ್ರಿಕೆಟ್​ ಮಂಡಳಿಯ ವತಿಯಿಂದ ಸಚಿನ್​ ತೆಂಡೂಲ್ಕರ್​ ಅವರು “ನವೋ” ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೀಡಿ ಗೌರವಿಸಿದ್ದರು. ಶಿವನ ಮಾದರಿಯಲ್ಲಿ ಈ ಸ್ಟೇಡಿಯಂ ನಿರ್ಮಾಣವಾಗುತ್ತಿದೆ.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!