Karnataka Budget Session 2024: 110 ಹಳ್ಳಿಗಳಿಗೆ ಮೇಯೊಳಗೆ ಕುಡಿಯಲು ಕಾವೇರಿ ನೀರು: ಡಿ.ಕೆ.ಶಿವಕುಮಾರ್
Karnataka Budget Session 2024: ಬೆಂಗಳೂರಿನ ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ, ಸೀವೇಜ್ ಪ್ಲಾಂಟ್ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಬೆಂಗಳೂರಿನ ಹೊರ ವಲಯಕ್ಕೆ ಕಾವೇರಿ ನೀರನ್ನು ತರುವ ಬಗ್ಗೆ ಚರ್ಚೆಯಾಗಿದೆ. ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದು ನಿಂತಿದೆ. ಮತ್ತಷ್ಟು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಾ ಮುಂದೆ ಸಾಗುತ್ತಿದೆ. ಹೀಗಾಗಿ ಇಲ್ಲಿ ಕೆಲವು ಕಡೆ ಮೂಲಭೂತ ಸೌಕರ್ಯಗಳು ಆಗಬೇಕಿದೆ. ಬಹುಮುಖ್ಯವಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಹ ಕಾರ್ಯೋನ್ಮುಖವಾಗಿದೆ. ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ, ಸೀವೇಜ್ ಪ್ಲಾಂಟ್ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು.
First Published on Vistara News.

Comments
Post a Comment