Lakshmi Hebbalkar : ಗ್ಯಾರಂಟಿ ಯಾರಿಗೆ ತಲುಪಿಲ್ಲ ಹೇಳಿ, ಖುದ್ದಾಗಿ ತಲುಪಿಸುತ್ತೇವೆ ಎಂದ ಹೆಬ್ಬಾಳ್ಕರ್‌

 Lakshmi Hebbalkar : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾರಿಗಾದರೂ ತಲುಪದೆ ಇದ್ದರೆ ಅದನ್ನೂ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ಯಾರಂಟಿ ಸಮಾವೇಶಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್‌.


ಕೆ.ಜಿ.ಹಳ್ಳಿ (ಮಾಲೂರು): ಗ್ಯಾರಂಟಿ ಸಮಾವೇಶಗಳನ್ನು (Guarantee Samavesha) ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ. ಯಾರಿಗೆ ತಲುಪಿಲ್ಲ ಎಂದು ತಿಳಿಸಿದರೆ ಅವರಿಗೆ ಖುದ್ದಾಗಿ ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದ್ದಾರೆ.

ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಅಂಗನವಾಡಿ, ಆಶಾ‌ ಕಾರ್ಯಕರ್ತೆಯರ ಶ್ರಮದಿಂದ ಗ್ಯಾರಂಟಿ ಯೋಜನೆಗಳು (Guarantee Schemes) ಯಶಸ್ವಿಯಾಗಿವೆ ಎಂದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!